08 June 2020

ಎರಡು ತಾಳಮದ್ದಲೆ ಮತ್ತು ಒಂದು ಕಾವ್ಯವಾಚನ

ನಮ್ಮ ಯಕ್ಷಮಿತ್ರ ಟೊರಾಂಟೋ ವತಿಯಿಂದ ಎರಡು ತಾಳಮದ್ದಲೆ ಮತ್ತು ಶ್ರೀ ಶ್ರೀಕಾಂತ್ ಅಪೇಕ್ಷೆಯಮೇರೆಗೆ ಕೆಎಸ್ಟಿಗಾಗಿ ಒಂದು ಗಮಕ-ಕಾವ್ಯವಾಚನ ಮಾಡಿದ್ದೇವೆ ಅದರ ವೀಡಿಯೋ ನೋಡಿ.

ನನ್ನ ಪಾತ್ರದಲ್ಲಿ ಹಲವು ಹೊಸತು ಪ್ರಯತ್ನ ಮಾಡಿದ್ದೇನೆ. ಅವು ಹೀಗಿವೆ:

ವಾಲಿವಧೆ ತಾಳಮದ್ದಲೆ
೧. ರಾಮ ವಂಶದ ಪ್ರತೀಕವಾಗಿ ಮಾತಾಡುವುದು
ಸನ್ನಿವೆಶಗಳನ್ನೇ ಬಳಸಿ ಹಿಂದಿನ ಕಥೆ ಅನ್ವಯಮಾಡಬೇಕು ಎನ್ನುವ ಶ್ರೀ ಪ್ರಭಾಕರ ಜೋಷಿಯವರ ಸಲಹೆಯನ್ನು ಇನ್ನೂ ಅನೇಕ ಸಲಹೆ ಮತ್ತು ತಂತ್ರ ಬಳಸಿಕೊಂಡಿದ್ದೇನೆ. ಉದ್ದೇಶಪೂರ್ವಕವಾಗಿ ಪಂಚಮ ಶ್ರುತಿಯಲ್ಲಿ ಮಾತಾಡಿ ಪ್ರಾಣ ಕಳೆದುಕೊಳ್ಳದೇ ಇನ್ನೂ ಇದ್ದೇನೆ. ನಾನು ಹಾಡುವವನಾದರೂ ಕಂಠಕ್ಕೆ ಕಷ್ಟ ಸ್ವಾಮಿ.



ಕೃಷ್ಣಸಂಧಾನ ತಾಳಮದ್ದಲೆ
೧. ಕೌರವ ಭಾರತದ ರಾಜಕೀಯದ ಹಿನ್ನೆಲೆಯಲ್ಲಿ ಗುರುತಿಸಿಕೊಂಡು ಮಾತಾಡುವುದು
೨. ಪಾಂಡವರಲ್ಲಿ ನ್ಯಾಯನೀತಿ ಧರ್ಮ ಎಂಬುದು ಒಂದು ದೌರ್ಬಲ್ಯ ಎನ್ನುವಷ್ಟು ಇದೆ - ರಾಜಕೀಯಕ್ಕೆ ಅದು ಸಲ್ಲ ಎಂಬ ದ್ವನಿಯಲ್ಲಿ ಪ್ರಾಮಾಣಿಕವಾಗಿ ಅವರನ್ನು ದೂರ ಇಟ್ಟು ಸಿಂಹಾಸನ ರಕ್ಷಣೆ ಮಾಡುತ್ತಿದ್ದೇನೆ ಎಂಬ ಧೋರಣೆ.
೩. ಪಾಂಡವರ ಹಿಂದೆ ಸೋಗಿದೆ. ಪ್ರಚಾರಪ್ರಿಯರು ಎನ್ನುವ ಅರ್ಥಗ್ರಹಿಕೆ



ಕಾವ್ಯವಾಚನ - ಗಮಕ
ಇದರಲ್ಲಿ ಸುಮಾರು ೧೪ ರಾಗದ ಛಾಯೆ ಇದೆ. ಇದರಲ್ಲಿ ಸುಮಾರು ೧೦ ನಾನು ಬಳಸಿದ್ದು ಉಳಿದವು ಹಿರಿಯರಾದ ಗಮಕಿ ಕೆರೆಕೊಪ್ಪದ ನರಹರಿ ಶರ್ಮ ಮತ್ತು ಹೊಸಬಾಳೆ ಸೀತಾರಾಮರಾಯರಿಂದ ಕೇಳಿದ್ದನ್ನು ಅನ್ವಯಿಸಿದ್ದೇನೆ. ನಾನು ಕಲಿತಿದ್ದು ಹೇಳಬೇಕು. ರಾಗವನ್ನು ಬಳಸಿ ಸಂಯೋಜನೆ ಮಾಡುವುದರಲ್ಲಿ ಅನೇಕವಿಧ ಇದೆ. ಇರುವ ಸಂಯೋಜನೆಯನ್ನೇ ಬೇರೆಯ ಸಾಹಿತ್ಯಕ್ಕೆ ಬಳಸುವುದು. ಹೆಚ್ಚಿನವರು ಮಾಡುವುದು ಇದು. ಇದನ್ನು ವಿತಾಳಕ್ಕೆ ಮಾಡಿದಾಗ ಅಲ್ಲಿನ ಲಯಬಂದು ಸಾಹಿತ್ಯಕ್ಕೆ ಸರಿಕೂರದೇ ಹೋಗಬಹುದು. ಇನ್ನು ಛಂದೋಭಂಗವಾಗಲೂ ಬಹುದು (ಕೆಲವೆಡೆ ಆಗಿದೆ- ಅನನುಭವ). ಅಂದರೆ ಭಾಮಿನಿಯನ್ನು ವಿತಾಳವಾಗಿ ಓದುವುದಾದರೂ ತ್ರಿಪುಟಕ್ಕೆ ಹೋಲಬೇಕು. ಹೀಗೆ ಛಂದೋಭಂಗವೂ ಆಗದೇ ಬೇರೆ ಸಂಯೋಜನೆಯ ಲಯವೂ ಸ್ವರವೂ ನಕಲಾಗದೇ ಸಾಹಿತ್ಯ ಅರ್ಥ ಎಲ್ಲ ಸರಿ ಇದ್ದು ಸ್ವತಂತ್ರವಾಗಿ ಭಾವಕ್ಕೆ ಹೊಂದುವಹಾಗೆ ಹಾಡುವವರು ಬಹಳ ಕಡಿಮೆ. ಶಾಸ್ತ್ರೀಯ ಎಂದು ಹಾಡುವವರೂ ಎಡವುವುದು ಅಲ್ಲೇ. ಇಲ್ಲಿ ಪ್ರಯತ್ನ ಮಾಡಿದ್ದೇನೆ ಒಂದಿಷ್ಟುಕಡೆ ಅದು ಸರಿಯಾಗಿದೆ ಎಂದು ನಂಬಿಕೆ. ಕೇಳಿ ನೋಡಿ. ಅಲ್ಲಲ್ಲಿ ರಾಗದ ಅಭ್ಯಾಸದ ಅಭಾವ ಕಾಣುತ್ತದೆ. ಕೆಲವೆಡೆ ಮಿಶ್ರವಾಗಿದೆ. ಆಡ್ಜಸ್ಟ್  ಮಾಡಿಕೊಳ್ಳಿ.


ಪದ್ಯಗಳು ಇಲ್ಲಿ ಲಭ್ಯ: ನೋಡಿ



No comments:

Post a Comment

Please leave a note about what you think about this write up. Thanks.

ಯಕ್ಷಮಿತ್ರದಿಂದ ಹೊಸ್ತೋಟ ಭಾಗವತರ ಯಕ್ಷಗಾನ ಲಕ್ಷಣ ಗ್ರಂಥ ಪ್ರಕಟಣೆ

                      ಪುಸ್ತಕಕ್ಕಾಗಿ ಸಂಪರ್ಕಿಸಿ ಅಮೇರಿಕಾಸ್: +16473283934                        ಭಾರತ — ರವೀಂದ್ರ ಮುದ್ರಣಾಲಯ ಸಾಗರ, ಮೋ: +9194495872...